ಎ. ಆರ್‌. ಮಣಿಕಾಂತ್ | A.R. Manikanth

ಎ. ಆರ್‌. ಮಣಿಕಾಂತ್ | A.R. Manikanth

ಪತ್ರಕರ್ತ, ಬರಹಗಾರರಾಗಿರುವ ಮಣಿಕಾಂತ್ ಅವರು ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆಯತನಹಳ್ಳಿಯವರು. ಆಟೋ ಮೊಬೈಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಇವರು ವಿಜಯ ಕರ್ನಾಟಕ, ಹಾಯ್ ಬೆಂಗಳೂರು, ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿರುವ ಇವರು ಈ ಗುಲಾಬಿಯು ನಿನಗಾಗಿ, ಮರೆಯಲಿ ಹ್ಯಾಂಗ, ಉಭಯ ಕುಶಲೋಪರಿ ಸಾಂಪ್ರತ, ಹಾಡು ಹುಟ್ಟಿದ ಸಮಯ ಎಂಬ ಅಂಕಣಗಳನ್ನು ಬರೆದಿದ್ದಾರೆ.
ಇವರ ಬರೆದಿರುವ ಕೃತಿಗಳೆಂದರೆ ಅಮ್ಮ ಹೇಳಿದ ಎಂಟು ಸುಳ್ಳುಗಳು, ಹಾಡು ಹುಟ್ಟಿದ ಸಮಯ, ಅಪ್ಪ ಅಂದ್ರೆ ಆಕಾಶ, ಭಾವ ತೀರ ಯಾನ, ಮನಸು ಮಾತಾಡಿತು ಮುಂತಾದವು. ಇವರ ಅಮ್ಮ ಹೇಳಿದ ಎಂಟು ಸುಳ್ಳುಗಳು ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅವ್ವ ಪ್ರಶಸ್ತಿ ದೊರಕಿದೆ.

If you like author ಎ. ಆರ್‌. ಮಣಿಕಾಂತ್ | A.R. Manikanth here is the list of authors you may also like

Buy books on Amazon

Total similar authors (15)